ಬಂಟ್ವಾಳ: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ವ್ಯಕ್ತಿ ಅರೆಸ್ಟ್.!

ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ವ್ಯಕ್ತಿ ಅರೆಸ್ಟ್.!

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತ್ರತ್ವದ ತಂಡ ಬಂಧಿಸಿದೆ.

ಬಂಧಿತ ಆರೋಪಿಯನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎನ್ನಲಾಗಿದೆ.

ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ನಿಸಾರ್ ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲಿಗೆ ಹೋಗಿ ಜೈಲಿನಿಂದ ಹೊರಬಂದಿದ್ದ.

ಜೈಲಿನಿಂದ ಹೊರ ಬಂದ ಕೆಲ ದಿನಗಳಲ್ಲಿಯೇ ಮತ್ತೆ ಪರಿಚಯಸ್ಥನಿಗೆ ಕ್ಷುಲ್ಲಕ ಕಾರಣಕ್ಕಾಗಿ ಕತ್ತರಿಯಿಂದ ಇರಿದು ಪರಾರಿಯಾಗಿದ್ದ. ಇಂದು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.