ನೂತನ ಸಂಸತ್ ಭವನವನ್ನು ಮೋದಿ ಉದ್ಘಾಟನೆ ಮಾಡಬಾರದಂತೆ.!

ಏನಿದು ನೂತನ ಸಂತ್ ಭವನದ ವಿವಾದ.?

ನೂತನ ಸಂತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವು ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಭಾರೀ ವಿವಾದವೇ ಏರ್ಪಟ್ಟಿದೆ.

ಈ ನಡುವೆ ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು ಸುಪ್ರಿಂಕೋರ್ಟ್ ಗೆ ಸಲ್ಲಿಕೆಯಾಗಿದೆ. ಭಾರತದ ನೂತನ ಸಂಸತ್ ಭವನವನ್ನು ಮೇ 28 ರಂದು ಉದ್ಘಾಟಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಆದರೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ ಇನ್ನೂ ಇತರೆ ವಿರೋಧ ಪಕ್ಷಗಳು ಸಂವಿಧಾನದ ಪ್ರಕಾರ ರಾಷ್ಟ್ರಪತಿ ಉದ್ಘಾಟಿಸಬೇಕು ಎಂದು ಹೇಳುತ್ತಿದ್ದಾರೆ.ಹಾಗೆಯೇ ರಾಷ್ಟ್ರಪತಿ ಮುರ್ಮು ಅವರನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಆಹ್ವಾನಿಸಿಯೇ ಇಲ್ಲ ಎಂದು ಕಾಂಗ್ರೆಸ್ ದೂರಿದೆ.

ಸಲ್ಲಿಸಿರುವ ಅರ್ಜಿ ಪ್ರಕಾರ, "ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘಿಸಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ ಮತ್ತು ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ - ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಅಧಿಕಾರವಿದೆ "ಎಂದು ಹೇಳಿಲಾಗಿದೆ.

ಇನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನದ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು 20 ಪ್ರತಿಪಕ್ಷಗಳು ಪ್ರಕಟಿಸಿವೆ. "ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗೊತ್ತಿರುವ ಪ್ರಧಾನಿ ಮೋದಿಯವರು ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ನಿರ್ಧಾರವು ಘೋರ ಅವಮಾನ ಮಾತ್ರವಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ" ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.

ಭಾರತದ ಸಂವಿಧಾನದ ಪ್ರಕಾರ ಸಂಸತ್ತು ಎಂದರೆ ರಾಷ್ಟ್ರಪತಿ ಹಾಗೂ ಲೋಕಸಭೆ, ರಾಜ್ಯಸಭೆಯನ್ನು ಒಳಗೊಂಡಿರುವಂಥದ್ದಾಗಿದೆ. ಪ್ರಧಾನಿಯು ಸಚಿವ ಸಂಪುಟದ ಮುಖ್ಯಸ್ಥರಾಗಿರುತ್ತಾರೆ, ರಾಷ್ಟ್ರಪತಿಯು ಪ್ರಧಾನಿ ಹಾಗೂ ಸಚಿವ ಸಂಪುಟದ ಮೇರೆಗೆ ಕಾರ್ಯ ನಿರ್ವಹಿಸುತ್ತಾರೆ. ರಾಷ್ಟ್ರಪತಿ ಮೊದಲ ಸಭೆಯನ್ನುದ್ದೇಶಿ ಮಾತನಾಡಬೇಕು, ರಾಷ್ಟ್ರಪತಿ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ, ಶಾಸಕಾಂಗ, ನ್ಯಾಯಾಂಗ, ತುರ್ತುಸ್ಥಿತಿ ಮತ್ತು ಮಿಲಿಟರಿ ಸೇರಿರುತ್ತದೆ ಎಂದು ಸಂವಿಧಾನದಲ್ಲಿ ಬರೆಯಲಾಗಿದೆ.