ಬಂಟ್ವಾಳ: ಹಳೆಯ ವೈಷಮ್ಯ ಸ್ನೇಹಿತನ ಕೈ ತುಂಡರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಹಳೆಯ ವೈಷಮ್ಯ ಸ್ನೇಹಿತನ ಕೈ ತುಂಡರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬಂಟ್ವಾಳ: ಹುಡುಗಿ ವಿಚಾರದಲ್ಲಿ ದ್ವೇಷವಾಗಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ ಕೈಯನ್ನು ತುಂಡರಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರ ತಂಡ ಬಂಧಿಸಿದೆ.

ಮೇ. 21 ರಂದು ರಾತ್ರಿ ವೇಳೆ ಐದು ವರ್ಷದ ಹಿಂದಿನ ಮದುವೆ ಪ್ರಸ್ತಾಪ ವಿಚಾರವನ್ನು ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಆತ ಕೈ ಕಡಿದು ತುಂಡು ಮಾಡಿ ಆರೋಪಿ ಪರಾರಿಯಾಗಿದ್ದ. ಬಂಟ್ವಾಳ ನಿವಾಸಿ ಶಿವರಾಜ್ ಕುಲಾಲ್ ಎಂಬಾತನ ಕೈಯನ್ನು ಆತನ ಪರಿಚಿತ ಆರೋಪಿ ಸಂತೋಷ್ ಕಡಿದಿದ್ದ. ಮೇ.21 ರಂದು ಘಟನೆ ನಡೆದಿತ್ತು. ಸಂತೋಷ್ ಎಂಬಾತನ ಅಕ್ಕನ ವಿಚಾರದಲ್ಲಿ ಶಿವರಾಜ್ ನಲ್ಲಿ ಮಾತಿಗೆ ಮಾತು ಬೆಳೆದು ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಗೆ ಕತ್ತಿಯಿಂದ ಕಡಿದಿದ್ದಾನೆ.

ಆದರೆ ಶಿವರಾಜ್ ಕೈಯನ್ಜು ಅಡ್ಡಹಿಡಿದ ಪರಿಣಾಮವಾಗಿ ಕೈಯ ಹಸ್ತ ತುಂಡಾಗಿ ಬಿದ್ದಿದೆ. ಕೂಡಲೇ ಶಿವರಾಜ್ ಆತನ ಸ್ನೇಹಿತರ ಮೂಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ ಆದರೂ ಕೈಯನ್ನು ಜೋಡಿಸುವಲ್ಲಿ ವಿಫಲವಾಗಿದೆ. ಆದರೆ ಘಟನೆ ನಡೆದ ಬಳಿಕ ಸಂತೋಷ್ ತಲೆಮರೆಸಿಕೊಂಡು ಪೋಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ. ಇಂದು ಸಂಜೆ ವೇಳೆ ಕಾರ್ಯಚರಣೆಯಲ್ಲಿದ್ದ ನಗರ ಠಾಣಾ ಪೋಲೀಸರ ತಂಡದ ಬಲೆಗೆ ಬಿದ್ದಿದ್ದಾನೆ.

ಘಟನೆ ಹಿನ್ನೆಲೆ:

ಶಿವರಾಜ್ ಕುಲಾಲ್ 5 ವರ್ಷಗಳ ಹಿಂದೆ ಆರೋಪಿ ಸಂತೋಷನ ಅಕ್ಕಳನ್ನು ಮದುವೆಯಾಗುವುದಾಗಿ ಹೇಳಿದ್ದ ಆದರೆ ಅದಕ್ಕೆ ಮನೆಯವರು ಒಪ್ಪದಿದ್ದಾಗ ಶಿವರಾಜ್ ಕುಲಾಲ್ ಆ ವಿಚಾರವನ್ನು ಅಲ್ಲಿಗೆ ಬಿಟ್ಟಿದ್ದಾರೆ. ಈ ವಿಚಾರವನ್ನು ದ್ವೇಷವಾಗಿ ಇಟ್ಟುಕೊಂಡು ಶಿವರಾಜ್ ಕುಲಾಲ್ ಮನೆಯಿಂದ ಹೊರಗೆ ಕರೆದು ಕೊಲೆ ಮಾಡುವ ಉದ್ದೇಶದಿಂದ ತಲೆಗೆ ತಲವಾರು ಬೀಸಿ ಹಾಗೂ ಕೈಯನ್ನು ಕಡಿದು ತುಂಡು ಮಾಡಿದ್ದಾನೆ.