ಮಂಗಳೂರು: ಗೋವುಗಳನ್ನು ಸಾಗಿಸುತ್ತಿದ್ದ ನಾಲ್ವರ ಬಂಧನ

ಅಕ್ರಮ ಜಾನುವಾರು ಸಾಗಾಟ - ನಾಲ್ವರ ಬಂಧನ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಜೂನ್ 5ರ ಸೋಮವಾರ ತಡ ರಾತ್ರಿ ಕಲ್ಲಾಪು ಬಳಿ ಬಂಧಿಸಲಾಗಿದೆ,

ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್ , ಫಯಾಝ್ ಮತ್ತು ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ.

ಆರೋಪಿಗಳು ಅಂಬ್ಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ವಧೆ ಮಾಡಲು ಸಾಗಿಸುತ್ತಿದ್ದರು. ದ್ವಿಚಕ್ರ ವಾಹನವೊಂದು ವಾಹನವನ್ನು ಹಿಂಬಾಲಿಸುತ್ತಿತ್ತು. ಈ ವೇಳೆ ವಾಹನ ಕೆಟ್ಟು ರಸ್ತೆಯ ಮೇಲೆ ಏರಲು ಸಾಧ್ಯವಾಗದಿದ್ದಾಗ, ಈ ಮೂವರು ವಾಹನ ತಳ್ಳಲು ಪ್ರಾರಂಭಿಸಿದರು. ಸ್ಥಳೀಯ ನಿವಾಸಿಗಳು ವಾಹನವನ್ನು ತಳ್ಳಿ ಸಹಾಯ ಮಾಡಲು ಹೋದಾಗ ನಾಲ್ಕು ಹಸುಗಳನ್ನು ಕಟ್ಟಿ ಹಾಕಿ ಟಾರ್ಪಲ್ ಹಾಕಿರುವುದು ಗಮನಕ್ಕೆ ಬಂದಿತ್ತು. ವಿಚಾರಣೆ ನಡೆಸಿದಾಗ ಆರೋಪಿಗಳು ಸರಕು ಸಾಗಣೆ ವಾಹನ, ಹಸುಗಳು ಹಾಗೂ ದ್ವಿಚಕ್ರ ವಾಹನವನ್ನು ಬಿಟ್ಟು ಓಡಿ ಹೋಗಿದ್ದರು.