ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಮೂಡುಬಿದಿರೆ ಇದರ 6೦ನೇ ವರ್ಷದ ಗಣೇಶೋತ್ಸವ ಸಂಭ್ರಮ ಪ್ರಯುಕ್ತ ಪವರ್ ಫ್ರೆಂಡ್ಸ್ ಬೆದ್ರ ಸಮಾಜ ಮಂದಿರ ಮೂಡಬಿದಿರೆ ಇವರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಸಣಾ ಶಿಬಿರ ಹಾಗೂ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ನಡೆಯಲಿದೆ.
ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಸಣಾ ಶಿಬಿರ ಹಾಗೂ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ (ಅ೦ಚೆ ಇಲಾಖೆಯ ಜನೋಪಯೋಗಿ ಸೇವಾ ಸೌಲಭ್ಯಗಳು) ದಿನಾಂಕ : 06-08-2023ನೇ ಆದಿತ್ಯವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ಸಮಾಜ ಮಂದಿರ, ಮೂಡುಬಿದಿರೆ ಇಲ್ಲಿ ನಡೆಯಲಿದೆ. ಮೂಡುಬಿದಿರೆ ತಾಲೂಕಿನ ಸಮಸ್ತ ನಾಗರಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.