ಮಂಗಳೂರು: ರಿಕ್ಷಾದಲ್ಲಿ ದನದ ಮಾಂಸ ಸಾಗಾಟ - ಮೂವರು ಅರೆಸ್ಟ್.!

ಕ್ವಿಂಟಾಲ್‌ಗಟ್ಟಲೆ ದನದ ಮಾಂಸ ಸಾಗಾಟ
ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಆಟೋ ರಿಕ್ಷಾದಲ್ಲಿ ಕ್ವಿಂಟಾಲ್‌ಗಟ್ಟಲೆ ದನದ ಮಾಂಸ ಸಾಗಾಟ ಮಾಡುತ್ತಿದ್ದವರನ್ನ ಬಜರಂಗದಳದ ಕಾರ್ಯಕರ್ತರು ಭಾನುವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ ಘಟನೆಗೆ ಸಂಬಂಧಪಟ್ಟ0ತೆ ಮೂವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್, ಜೋಕಟ್ಟೆಯ ಬದ್ರುದ್ದೀನ್ ಮತ್ತು ಯಾಸೀನ್ ಎಂದು ಗುರುತಿಸಲಾಗಿದೆ.

ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್ ಸ್ಟಾಲ್‌ಗಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ತಡೆದು ವಿಚಾರಿಸಿದಾಗ ಆರೋಪಿ ಎಲ್ಲಾ ವಿಚಾರಗಳನ್ನು ಬಾಯಿಬಿಟ್ಟಿದ್ದಾನೆ. ಸದ್ಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.