ಬಿಜೆಪಿ-ಜೆಡಿಎಸ್ ಮೈತ್ರಿ : ಕುಮಾರಸ್ವಾಮಿ ದೆಹಲಿಗೆ

ಲೋಕಸಭಾ ಚುನಾವಣೆ - ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಮಾತುಕತೆ ನಡೆಸಲು ಇಂದು ಹೆಚ್​ಡಿ ಕುಮಾರಸ್ವಾಮಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಜೆಡಿಎಸ್ ನಾಲ್ಕು ಕ್ಷೇತ್ರಗಳ (ಮಂಡ್ಯ, ಹಾಸನ, ಕೋಲಾರ, ತುಮಕೂರು) ಬೇಡಿಕೆ ಮುಂದಿಟ್ಟಿದ್ದು,ತುಮಕೂರು ಲೋಕಸಭಾ ಕ್ಷೇತ್ರದ ವಿಚಾರ ಇನ್ನೂ ಅಂತಿಮವಾಗಿಲ್ಲ. ಇಂದಿನ ಚರ್ಚೆ ವೇಳೆ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮುಂದಿನ ದಿನ ಮಾತನಾಡುತ್ತೇನೆ. ಎಷ್ಟು ಸೀಟ್ ಅಂತಾ ನಾವು ಚರ್ಚಿಸಿಲ್ಲ, ಬಿಜೆಪಿಯೂ ಚಿಂತನೆ ಮಾಡಿಲ್ಲ. 28 ಕ್ಷೇತ್ರದ ಇಂದಿನ ಪರಿಸ್ಥಿತಿ ಅವಲೋಕಿಸಿ ಚರ್ಚೆ ಮಾಡುತ್ತೇವೆ ಎಂದರು. ಇನ್ನು ಮೈತ್ರಿ ವಿಚಾರವಾಗಿ ಸಂಜೆ ಅಮಿತ್ ಶಾ, ಜೆಪಿ ನಡ್ಡಾ ಜೊತೆ ಚರ್ಚೆ ಮಾಡುವೆ. ಅವಶ್ಯಕತೆ ಬಿದ್ದರೆ ಪ್ರಧಾನಿ ಮೋದಿ, ದೇವೇಗೌಡರು ಚರ್ಚಿಸುತ್ತಾರೆ ಎಂದಿದ್ದಾರೆ.