ಮಂಗಳೂರು: ಹೃದಯಾಘಾತಕ್ಕೆ ಪೊಲೀಸ್ ಸಿಬ್ಬಂದಿ ಬಲಿ.!

ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಗೆ ಹೃದಯಾಘಾತ

ಮಂಗಳೂರು : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. 

ಮೃತ ದುರ್ದೈವಿಯನ್ನು ಸೋಮನ ಗೌಡ ಚೌದರಿ (31) ಎನ್ನಲಾಗಿದೆ. 

ವಯರ್ ಲೆಸ್ ಇನ್ಸ್ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತಾ ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್ಪೆಕ್ಟರ್ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.

ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸಿಬಂದಿ ಇತ್ತಿಚಿನ ದಿನಗಳಲ್ಲಿ ಅಕಾಲಿಕಾ ಮರಣಕ್ಕೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸಿದೆ.