ಕಾರ್ಕಳ: ನಾಪತ್ತೆಯಾಗಿದ್ದ ಸಂದೇಶ್ ಶೆಟ್ಟಿ ಶವ ಹೊಳೆಯಲ್ಲಿ ಪತ್ತೆ.!

ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯೋರ್ವರು ಇಂದು  ಶವವಾಗಿ ಪತ್ತೆಯಾದ ಘಟನೆ ಕಾರ್ಕಳದಲ್ಲಿ  ನಡೆದಿದೆ. 

ಐದು ದಿನಗಳ ಹಿಂದೆ ನಾಪತ್ತೆಯಾದ ಕಾರ್ಕಳದ ದುರ್ಗ ಗ್ರಾಮದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಎಂಬವರ ಶವ ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆಯಡಿ ಪತ್ತೆಯಾಗಿದೆ.

ಸಂದೇಶ್ ಶೆಟ್ಟಿಯವರು ನಾಪತ್ತೆಯಾದ ದಿನವೇ ಅವರು ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆ0ದು ಅಂದಾಜಿಸಲಾಗಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.