ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಕೇರಳ: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಕರಿಪುರದಲ್ಲಿ ನಡೆದಿದೆ. ಮಹಿಳಾ ಲೀಗ್‌ನ ನಾಯಕಿ ಹಾಗೂ ತ್ರಿಕರಿಪುರ ಪಂಚಾಯತ್ ಮಾಜಿ ಸದಸ್ಯೆ ಶಹರ್ಬಾನ್ ಅವರ ಪುತ್ರಿ ಶಿಫಾನಾಥ್ (21) ಅವರು ಉಡುಂಬ0ತಲ ಪುನತಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಂಗಳವಾರ ಸಂಜೆ ಶಿಫಾನಾಥ್ ಮನೆಯ ಎರಡನೇ ಮಹಡಿಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕೆಲವು ತಿಂಗಳ ಹಿಂದೆ ಶಿಫಾನಮ್ ಮದುವೆಯಾಗಿದ್ದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.