ಸ್ಕೂಟರ್‌ಗೆ ಬಸ್ ಡಿಕ್ಕಿ - ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

ಸ್ಕೂಟರ್‌ಗೆ ಬಸ್ ಡಿಕ್ಕಿ - ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

ಕಾಸರಗೋಡು: ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಕಾಸರಗೋಡಿನ ಉಪ್ಪಳ ಸೋಂಗಲ್ ಬದರಿಯಾ ಜುಮಾ ಮಸೀದಿ ವ್ಯಾಪ್ತಿಯ ಮಹ್ಮದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (21) ಮೃತಪಟ್ಟ ಯುವಕ.

ಇಬ್ರಾಹಿಂ ಖಲೀಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು. 

ಭಾನುವಾರ ರಾತ್ರಿ 8 ಗಂಟೆಗೆ ನಾರಾಯಣ ಮಂಗಲದಲ್ಲಿ ಸೀತಾಂಗೋಳಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಖಲೀಲ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಖಲೀಲ್ ಸಹಿತ ಗಾಯಗೊಂಡಿರುವ ಮಣಿಮುಂಡ ಮೂಲದ ಮೊಹಮ್ಮದ್ ಮಹಸಿಲ್ (24) ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ. ಕುಂಬಳೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ..