ದಕ್ಷಿಣ ಕನ್ನಡ ಅಮೆಚೂರು ಕಬ್ಬಡಿ ಅಸೋಸಿಯೇಷನ್ ನಿಂದ 33 ವರ್ಷಗಳ ನಂತರ ಆಲ್ ಇಂಡಿಯಾ ಯುನಿವರ್ಸಿಟಿ ಕಬ್ಬಡಿ ಚಾಂಪಿಯನ್ ಶಿಪ್ ಗೆದ್ದುಕೊಂಡ ಆಳ್ವಾಸ್ ವಿದ್ಯಾ ಸಂಸ್ಥೆ ಹಾಗೂ ಉಜಿರೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಂಗಳೂರಿನ ಕುಡ್ಲ ಹೋಟೆಲ್ ನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ನಿರ್ದೇಶಕ ಮೋಹನ್ ಆಳ್ವ ರವರು 12 ಆಟಗಾರರಿಗೆ ತಲಾ 5 ಸಾವಿರದಂತೆ ಪ್ರೋತ್ಸಾಹ ಧನವನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಅಮರನಾಥ್ ರೈ, ಅಧ್ಯಕ್ಷ ರಾಕೇಶ್ ಮಲ್ಲಿ ಪದಾಧಿಕಾರಿಗಳು ಉಪಸ್ಥಿತರಿದ್ದರು.