ಉಡುಪಿ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

ಯುವಕ ನಾಪತ್ತೆ

ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕನೋರ್ವ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನ ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ಸುಜಿತ್ (26) ಎಂಬ ಗುರುತಿಸಲಾಗಿದೆ. ಏ.29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ಹಿಂದಿರುಗಿಲ್ಲ ಎಂದು ದೂರು ದಾಖಲಾಗಿದೆ.

ಸುಜಿತ್ 5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.