ಸುಳ್ಯ: ಬಸ್‌ ಢಿಕ್ಕಿ - ಬೈಕ್ ಸವಾರ ಶಿಕ್ಷಕ ಮೃತ್ಯು

ಚಿಕಿತ್ಸೆಗೆ ಸ್ಪಂದಿಸದೇ ಶಿಕ್ಷಕ ಪದ್ಮನಾಭ ಮೃತ್ಯು

ಸುಳ್ಯ: ಅರಂತೋಡು ಅರಂಬೂರಿನ ಪಾಲಡ್ಕದಲ್ಲಿ ಸಂಭವಿಸಿದ ಬಸ್‌ - ಬೈಕ್‌ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. 

ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್‌ ಪಾಲಡ್ಕದಲ್ಲಿ ಶುಕ್ರವಾರ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅಲ್ಲಿ ಮೃತಪಟ್ಟಿದ್ದಾರೆ.

ಗೂನಡ್ಕ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅವರು ಮೂಲತಃ ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿ ಮನೆಯವರಾಗಿದ್ದಾರೆ. ಸುಳ್ಯದಲ್ಲಿ ಅವರು ಕುಟುಂಬ ಸಮೇತ ವಾಸವಾಗಿದ್ದರು.