ತುಮಕೂರು: ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಜಗದೀಶ್ (44) ಮೃತ ಆಟೋ ಚಾಲಕ.
ತಡರಾತ್ರಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರಿಗೆ ಆಟೋ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಆಟೋ ಚಾಲಕ ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ. ತಡರಾತ್ರಿ ತುಕಾಲಿ ಸಂತೋಷ್ ಅವರು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ಮಾರ್ಗದಲ್ಲಿ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು.
ಈ ವೇಳೆ ತುಕಾಲಿ ಸಂತೋಷ್ ಕಾರಿಗೆ ಕುಡಿದ ಅಮಲಿನಲ್ಲಿ ಆಟೋ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಆದರೆ ಆಟೋ ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದವು. ಆ ಕೂಡಲೇ ಚಾಲಕ ಜಗದೀಶ್ನನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಟೋ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.