ಮಣಿಪಾಲ: 15 ವರ್ಷಗಳಿಂದ ತಲೆಮರಸಿಕೊಂಡಿದ್ದ ಆರೋಪಿ ಪಂಜಾಬ್‌ನಲ್ಲಿ ಅರೆಸ್ಟ್.!

ಹಳೆ ಪ್ರಕರಣದ ಆರೋಪಿ ಪಂಜಾಬ್‌ನಲ್ಲಿ ಬಂಧನ

ಮಣಿಪಾಲ : ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ಆರೋಪಿ ಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ.

ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಮ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.