ಮಂಗಳೂರು: ದ.ಕ.ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಗೊಂಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ಅವರು ಎ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.
ನಾಳೆ ರ್ಯಾಲಿ ಹಾಗೂ ಸಮಾವೇಶ ನಡೆಯಲಿದ್ದು, ಸಹಸ್ರ ಸಂಖ್ಯೆಯಲ್ಲಿ ಜನ ಸೇರುವ ನೀರಿಕ್ಷೆಯಿದೆ. ಈ ಸಂದರ್ಭ ಕಾರವಳಿಯ ಶಾಸಕರು ಹಾಗೂ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ.
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾ| ಚೌಟ 2002 ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ಬಳಿಕ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ತರಬೇತಿ ಪಡೆದು 2003ರಿಂದ 2010ರ ವರೆಗೆ ಗೂರ್ಖ ರೈಫಲ್ಸ್ ರೆಜಿಮೆಂಟ್ನಲ್ಲಿ ಆರ್ಮಿ ಅಧಿಕಾರಿಯಾಗಿದ್ದರು. ನಿವೃತ್ತರಾದ ಬಳಿಕ 2014ರಲ್ಲಿ ಇಂದೋರ್ನ ಐಐಎಂನಲ್ಲಿ ಪದವಿ ಪಡೆದಿದ್ದಾರೆ. ಅವಿವಾಹಿತರಾಗಿದ್ದು, ವಾಟ್ಸ್ಆ್ಯಪ್, ಎಕ್ಸ್, ಇನ್ಸ್ಟಾಗ್ರಾಮ್, ಫೇಸ್ಬುಕ್, ಯುಟ್ಯೂಬ್ಗಳಲ್ಲಿ ಖಾತೆ ಹೊಂದಿದ್ದಾರೆ.