ಮಂಗಳೂರು: ಮನೆಯವರು ಇಫ್ತಾರ್ ಕೂಟಕ್ಕೆ ತೆರಳಿದ್ದ ಸಮಯ ನೇಣು ಬಿಗಿದುಕೊಂಡ ಯುವಕ.!

ನೇಣು ಬಿಗಿದು ಯುವಕ ಆತ್ಮಹತ್ಯೆ

ಕೊಣಾಜೆ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ.

ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.