ಸುರತ್ಕಲ್: ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು

ಸುರತ್ಕಲ್ ಟೋಲ್ ಗೇಟ್ ತೆರವು

ಮಂಗಳೂರು:ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.