ಕಾಸರಗೋಡು: ವಿಷ ಸೇವಿಸಿದ್ದ ಎ ಎಸ್ ಐ ಚಿಕಿತ್ಸೆ ಫಲಿಸದೆ ಮೃತ್ಯು

ಕಾಸರಗೋಡು: ವಿಷ ಸೇವಿಸಿದ್ದ ಎ ಎಸ್ ಐ ಚಿಕಿತ್ಸೆ ಫಲಿಸದೆ ಮೃತ್ಯು

ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಎ ಎಸ್ ಐ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ.

ಬೇಡಡ್ಕ ಠಾಣಾ ಎ ಎಸ್ ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್ (50) ಮೃತಪಟ್ಟವರು. ಎರ್ನಾಕುಲಂ ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನ್ ಶನಿವಾರ ಸಂಜೆ ಮೃತ ಪಟ್ಟರು. ಏಪ್ರಿಲ್ ೨೯ ರಂದು ಮಧ್ಯಾಹ್ನ ಬೇಡಡ್ಕ ಪೊಲೀಸ್ ಠಾಣೆ ಯ ಸಮೀಪದ ವಸತಿ ಗೃಹದಲ್ಲಿ ವಿಷ ಸೇವಿಸಿದ್ದರು. ಕೂಡಲೇ ವಿಜಯನ್ ರವರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾದುದರಿಂದ ಬುಧವಾರ ಎರ್ನಾಕುಲಂ ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ರಾಜಕೀಯ ಒತ್ತಡವು ಆತ್ಮಹತ್ಯೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಯುವ ಕಾಂಗ್ರೆಸ್ ಕಾರ್ಯಕರ್ತರೋರ್ವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲು ವಿಜಯನ್ ರವರ ಮೇಲೆ ಕೆಲ ಅಧಿಕಾರಿಗಳು ಹಾಗೂ ಆಡಳಿತ ಪಕ್ಷದ ಕೆಲ ಮುಖಂಡರು ಒತ್ತಡ ಹೇರಿದ್ದರು. ಇದರಿಂದ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬರುತ್ತಿದೆ.