ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ವಿದ್ಯಾರ್ಥಿಯನ್ನು ಹೊರದಬ್ಬಿದ ಕೆಪಿಟಿ ಕಾಲೇಜು ಪ್ರಾಂಶುಪಾಲ

ವಿದ್ಯಾರ್ಥಿಗಳಿಂದ ನ್ಯಾಯಕ್ಕಾಗಿ ಹೋರಾಟ

ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ  ಕೆಪಿಟಿ ಕಾಲೇಜಿನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಕಾಲೇಜು ಮುಂಭಾಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. 

ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ನಡೆಯಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮದ್ಯಾಹ್ನದಿಂದ ಇವರೆಗೆ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಂಶುಪಾಲರು ಕಾಲೇಜಿನಿಂದ ಹೊರಗಡೆ ಬರುತ್ತಿಲ್ಲ ಎನ್ನಲಾಗಿದೆ.