ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ಅಪಘಾತಕ್ಕೆ ಬಾಲಕ ಬಲಿ

ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ಅಪಘಾತಕ್ಕೆ ಬಾಲಕ ಬಲಿ

ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ 10 ವರ್ಷದ ಬಾಲಕನೋರ್ವ ಸಾನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಬಾಲಕನನ್ನು  ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10)  ಎಂದು ಗುರುತಿಸಲಾಗಿದೆ.

ಜನವರಿ 1 ರಂದು ಸೈದಾಪುರದಿಂದ ಶಬರಿಮಲೆಗೆ ಟಾಟಾ ಏಸ್‌ ವಾಹನದಲ್ಲಿ ಅಯ್ಯಪ್ಪ ಮಾಲೆಧಾರಿಗಳು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಕೇರಳದ ಮನಪುರಂನ ಯಡಪ್ಪಾಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ.