ಶ್ರೀರಾಮ ಸೇನೆಯ ಬೆಳಗಾವಿ ಜಿಲ್ಲಾ ಘಟಕದ ಮುಖ್ಯಸ್ಥ ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ ನಡೆದಿದೆ.
ಶ್ರೀರಾಮಸೇನೆ ಸಂಘಟನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಬಳಿ ಫೈರಿಂಗ್ ನಡೆದಿದ್ದು, ಬೈಕ್ನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಫೈರಿಂಗ್ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ದಾಳಿಯಲ್ಲಿ ಗುಂಡು ರವಿ ಕೋಕಿತಕರ್ ಗದ್ದಕ್ಕೆ ತಾಗಿ ಬಳಿಕ ಅವರ ಜೊತೆಗಿದ್ದ ಚಾಲಕನ ಕೈಗೆ ತಗುಲಿದೆ. ಸದ್ಯ ಗಾಯಾಳುಗಳನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ರವಿ ಕೋಕಿತಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.