ಮಂಗಳೂರು : ವಿದ್ಯಾರ್ಥಿನಿಗೆ ಕಿರುಕುಳ - ಮುವಾದ್ ಅರೆಸ್ಟ್.!‌
ಬಸ್ ನಿಲ್ದಾಣದಲ್ಲಿ ಅಪ್ರಾಪ್ತೆಯ ಕೈಹಿಡಿದು ಎಳೆದ ಆರೋಪಿ

ಮಂಗಳೂರು : ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.

ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

ಆರೋಪಿ  ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. 

ನಿನ್ನೆ ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ ವಾಪಸ್ಸಾಗಿ ತಲಪಾಡಿ ಬಸ್ ನಿಲ್ದಾಣದಲ್ಲಿ ಬಸ್ಸಿಳಿದು ಸಹೋದರಿಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತ ನಿಂತಿದ್ದಳು. ಇದೇ ವೇಳೆ ಅದೇ ನಿಲ್ದಾಣದಲ್ಲಿ ನಿಂತಿದ್ದ ಮುವಾದ್ ವಿದ್ಯಾರ್ಥಿನಿ ಜತೆಗೆ ಅನುಚಿತವಾಗಿ ವರ್ತಿಸಿ, ಮನೆಗೆ ಬಿಡುವುದಾಗಿ ಹೇಳಿ ಕೈಹಿಡಿದು ಎಳೆದಿದ್ದಾನೆ. ತಕ್ಷಣ ವಿದ್ಯಾರ್ಥಿನಿ ಬೊಬ್ಬಿಡಲು ಆರಂಭಿಸಿದಾಗ ಸ್ಥಳೀಯ ರಿಕ್ಷಾ ಚಾಲಕರು ಮುವಾದ್ ನನ್ನು ಹಿಡಿದು, ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!