ನಿಟ್ಟೆ ಗುಂಡ್ಯಡ್ಕ ಕರಿಕಲ್ಲಿನ ಕ್ವಾರೆಯಲ್ಲಿ ಸ್ಟೋಟ
ಕಾರ್ಕಳ: ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಸಾವಿಗೀಡಾದ ಘಟನೆ ಸಂಭವಿಸಿದೆ.
ಸಾವಿಗೀಡಾದ ವ್ಯಕ್ತಿಯನ್ನು ಬಾಗಲಕೋಟೆಯ ವೆಂಕಟೇಶ್ (32) ಎಂದು ಗುರುತಿಸಲಾಗಿದೆ.
ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದಿಬಂದಿದೆ. ಕ್ವಾರೆಯಲ್ಲಿ ದುಡಿಯುತ್ತಿದ್ದ ಸಂಭವಿಸಿದ ಸ್ಪೋಟದಿಂದ ವೆಂಕಟೇಶ್ ಸ್ಥಳದಲ್ಲಿ ಕುಸಿದು ಬಿದ್ದು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
Comments
0 comment