ಮಂಗಳೂರು: ಅಂಗಡಿಗಳಿಗೆ ನುಗ್ಗಿದ ಖತರ್ನಾಕ್‌ ಕಳ್ಳ..!
ಮೂರು ಅಂಗಡಿಗೆ ನುಗ್ಗಿದ ಕಳ್ಳನಿಂದ ನಗದು, ಸಾಮಗ್ರಿ ಕಳವು

ಮಂಗಳೂರು: ಕಳ್ಳನೋರ್ವ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಜು. 2ರ ತಡರಾತ್ರಿ ವೇಳೆ ನಡೆದಿದ್ದು,  ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್, ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‌ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್ ಅಂಗಡಿಗಳಿಗೆ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್ ನಲ್ಲಿದ್ದ ನಗದು ಹಾಗೂ ಕೆಲವು ಸಾಮಗ್ರಿಗಳನ್ನು ಕಳವು ಮಾಡಿದ್ದಾನೆ.

ಸಿಲ್ವರ್ ಸ್ಟಾರ್ ಅಂಗಡಿಯೊಳಗೆ ನಡೆಸಿದ ಕೃತ್ಯವು ಅಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳನ ಮುಖವೂ ಇದರಲ್ಲಿ ಪತ್ತೆಯಾಗಿದೆ. ಹೊರ ರಾಜ್ಯ ಅಥವಾ ನೇಪಾಳ ಮೂಲದ ಕಾರ್ಮಿಕರು ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು ಸಹಿತ ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವೆಡೆ ಇದೇ ರೀತಿಯಲ್ಲಿ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!