ಹಾಡಹಗಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ.!
ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಸಂಭಾಲ್‌ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾದ ಘಟನೆ ನಡೆದಿದೆ.

ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚೌಧರಿ ಅವರು ತಮ್ಮ ಅಪಾರ್ಟ್‌ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಇನ್ನು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಕುಟುಂಬವು ಅಮಿತ್ ಚೌಧರಿ ಮತ್ತು ಅನಿಕೇತ್ ಮೇಲೆ ದೂರು ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ.

ರಾಜಕೀಯದಲ್ಲಿ ಸಕ್ರಿಯ ಭಾಗವಾಗಿರುವ ಚೌಧರಿ ಅವರು ಸಂಭಾಲ್‍ನ ಅಸ್ಮೋಲಿ ಬ್ಲಾಕ್‍ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಸದ್ಯ ಚೌಧರಿ ಹತ್ಯೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಕುಟುಂಬ ಗಂಭೀರ ಆರೋಪ ಮಾಡಿದೆ. ಅಲ್ಲದೆ ಅಮಿತ್ ಚೌಧರಿ ಮತ್ತು ಅನಿಕೇತ್ ಎಂಬ ಇಬ್ಬರ ಹೆಸರನ್ನು ಕೂಡ ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯಾವಳಿ

https://youtu.be/DzHou-rgQck


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!