ಗಾಂಜಾ ಮಾರಾಟ- ಆರೋಪಿ ಬಂಧನ
ಉಪ್ಪಿನಂಗಡಿ: ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ ಗಾಂಜಾವನ್ನು ಸಾಗಾಟ ಮಾಡತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಘವೇಂದ್ರ ಅಮೀನ್ ಬಂಧಿತ ಆರೋಪಿ.
ರಾಘವೇಂದ್ರನು ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿಂದ ತೆಗೆದುಕೊಂಡು ಮಂಗಳೂರು ಕಡೆಗೆ ತಾನು ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಲಪಡಿಸಿ ಪತ್ತೆ ಹಚ್ಚಿದ್ದಾರೆ.
ಆರೋಪಿಯಿಂದ 40,000 ರೂ. ಮೌಲ್ಯದ 2ಕೆಜಿ 100 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments
0 comment