ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಅಪಘಾತ
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ
ಬಂಟ್ವಾಳ: ರೋಗಿಯೋರ್ವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಗುರುವಾಯನಕೆರೆ ನಿವಾಸಿಯಾಗಿರುವ ಚಾಲಕ ಶಬೀರ್ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದೆ.
ಈ ವೇಳೆ ಅಪಘಾತದಲ್ಲಿ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ.ಈತನ ಸಹಿತ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಆದರೆ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಚಿಕಿತ್ಸೆ ಗೆ ಸ್ಪಂದಿಸಿದೆ ಮೃತ ಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
Comments
0 comment