ಬೆಳ್ತಂಗಡಿ: ಲೈಂಗಿಕ ಕಿರುಕುಳ ನೀಡಿದ ಮದ್ರಸಾ ಶಿಕ್ಷಕ
ಬೆಳ್ತಂಗಡಿ: ಲೈಂಗಿಕ ಕಿರುಕುಳ ನೀಡಿದ ಮದ್ರಸಾ ಶಿಕ್ಷಕ
6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ

ಬೆಳ್ತಂಗಡಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪ ಎದುರಿಸುತ್ತಿದ್ದ ಮದ್ರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಈ ಆರೋಪದಡಿ ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದ್ರಸಾ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾನನ್ನು ಪೊಲೀಸರು ಬಂಧಿಸಿದ್ದರು. 

ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್.ಎಂ. ಅವರು ಆರೋಪಿ ಮುಹಮ್ಮದ್ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿದ್ದು ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಪುತ್ತೂರು ಬೊಳುವಾರು ನಿವಾಸಿ ದಿವ್ಯರಾಜ್ ಹೆಗ್ಡೆ ವಾದಿಸಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!