ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆಗೈದ ಚರ್ಚ್ ಫಾದರ್
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆಗೈದ ಚರ್ಚ್ ಫಾದರ್

ಚರ್ಚ್ ಫಾದರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದು ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಮ್ಮನಹಳ್ಳಿಯ ಸೆಂಟ್ ಪಿಯೂಸ್ ಚರ್ಚ್ ಪಾದ್ರಿ ಜಯಕರನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಫಾದರ್ ಜಯಕರನ್ ಅನುಯಾಯಿಗಳಿಂದಲೂ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ. ಘಟನೆ ಬಗ್ಗೆ ಚರ್ಚ್ನ ಆಂತರಿಕ ಸಮಿತಿಗೂ ದೂರು ನೀಡಿದ್ದರೂ ಕ್ರಮ ಇಲ್ಲ ಎಂದು ಆರೋಪ ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಇನ್ನು ಚರ್ಚ್ ನಲ್ಲಿ ಹಣದ ವಿಚಾರಕ್ಕೆ ಹೈಡ್ರಾಮ ನಡೆಯುತ್ತಿದೆ ಎಂಮ ಮಾತುಗಳು ಕೇಳಿಬಂದಿದೆ. ಮಹಿಳೆ ವಿರುದ್ಧ ಚರ್ಚ್ ಫಾದರ್ ಕೂಡ ಪ್ರತಿ ದೂರು ದಾಖಲಿಸಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚರ್ಚ್ ಹಣಕಾಸಿನ ವಿಚಾರಕ್ಕೆ ಸುಳ್ಳು ಆರೋಪ ಮಾಡಿದ್ದಾರೆಂದು ಮಹಿಳೆ ಸೇರಿದಂತೆ 9 ಮಂದಿ ವಿರುದ್ಧ ಚರ್ಚ್ ಫಾದರ್ ದೂರು ಸಲ್ಲಿಸಲಾಗಿದೆ. ತಾನು ಚರ್ಚ್ ಫಾದರ್ ಆಗಿ ಅಧಿಕಾರ ವಹಿಸಿಕೊಳ್ಳದಂತೆ ಕಿರುಕುಳ ನೀಡಿದರು. ಆರೋಪಿಗಳು ಚರ್ಚ್ ಹಣ ದುರುಪಯೋಗ ಮಾಡಿಕೊಂಡಿದ್ದಾರೆ.

ಹಣದ ಲೆಕ್ಕ ಕೇಳಿದ್ದಕ್ಕೆ ಈ ರೀತಿ ಸುಳ್ಳು ಆರೋಪ ಮಾಡಿ ನನ್ನ ವಿರುದ್ಧ ದೂರು ನೀಡಿದ್ದಾರೆಂದು ಫಾದರ್ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಬಾಣವಾಡಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!