ಮಂಗಳೂರು: ವಿಮಾನದಲ್ಲಿ ಬಂದು ರಾತ್ರಿ ಹೊತ್ತಲ್ಲಿ ರೈಲ್ವೇ ಪ್ರಯಾಣಿಕರ ಚಿನ್ನಾಭರಣ ಕದಿಯುತ್ತಿದ್ದ ಇಬ್ಬರು ಅರೆಸ್ಟ್
ಮಂಗಳೂರು: ವಿಮಾನದಲ್ಲಿ ಬಂದು ರಾತ್ರಿ ಹೊತ್ತಲ್ಲಿ ರೈಲ್ವೇ ಪ್ರಯಾಣಿಕರ ಚಿನ್ನಾಭರಣ ಕದಿಯುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಉತ್ತರ ಪ್ರದೇಶದಿಂದ ಮಂಗಳೂರಿಗೆ ಬಂದು ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಇಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳು.

ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಸಂಶಯಗೊ0ಡು ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ತಮ್ಮ ಕಳ್ಳತನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಟಾರ್ಗೆಟ್ ಮಾಡಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಮಲಗಿರುತ್ತಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು ಎಂದು ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.

ಆರೋಪಿಗಳು ಪಾಲಕ್ಕಾಡ್, ತಿರುವನಂತಪುರA ಹಾಗೂ ಮಂಗಳೂರು - ಮುಂಬೈ ನಡುವಿನ ಕೊಂಕಣ ರೈಲ್ವೆಯ ರೈಲಿನಲ್ಲಿ ಹೆಚ್ಚು ಕಳವು ಮಾಡುತ್ತಿದ್ದರು. ರೈಲು ಪ್ರಯಾಣಿಕರಿಂದ ಕದ್ದು ಇರಿಸಿಕೊಂಡಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!