ಮಂಗಳೂರು: ಸುಳ್ಯ KVG ಎಂ.ಎಸ್ ರಾಮಕೃಷ್ಣ ಕೊಲೆ ಪ್ರಕರಣ -  ಡಾ. ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಮಂಗಳೂರು: ಸುಳ್ಯ KVG ಎಂ.ಎಸ್ ರಾಮಕೃಷ್ಣ ಕೊಲೆ ಪ್ರಕರಣ - ಡಾ. ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

12 ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ದೋಷಿಗಳಾಗಿರುವ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ. ರೇಣುಕಾ ಪ್ರಸಾದ್ ಸೇರಿದಂತೆ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ವೀಡಿಯೋ ಕಾನ್ಪರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಬಳಿಕ ಶಿಕ್ಷೆಯ ತೀರ್ಪು ಪ್ರಕಟಿಸಿದರು.

ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.

ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.

ಘಟನೆಯ ಹಿನ್ನಲೆ:

ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬೆರಲ್ ಎಜುಕೇಷನ್ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ವಯಸ್ಸಾದ ಮತ್ತು ಅನಾರೋಗ್ಯದ ಕಾರಣ ಶಿಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ.ವಿ. ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿ ಕೊಡಲಾಗಿತ್ತು.

ಆದರೆ, ಮತ್ತೋರ್ವ ಪುತ್ರ ಎ.ಎಸ್. ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಆಸ್ತಿ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ. 2009ರಲ್ಲಿ ಚಿದಾನಂದ ಅವರ ಪರ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ಅವರು ನೋಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದ ರೇಣುಕಾ ಪ್ರಸಾದ್, ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು.

11ರ ಏಪ್ರಿಲ್ 28ರಂದು ಬೆಳಗ್ಗೆ 7.45ರ ವೇಳೆಯಲ್ಲಿ ಅಂಬೆತಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬ0ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಒಟ್ಟು ಏಳು ಆರೋಪಿಗಳಿದ್ದು ಸಾಕ್ಷ್ಯಾಧಾರಗಳ ಕೊರತೆಯಿಂದ ಅವರೆಲ್ಲರನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016ರ ಅಕ್ಟೋಬರ್ 21ರಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಸರಕಾರ 2017ರಲ್ಲಿ ಹೈಕೋರ್ಟಿಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿತ್ತು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!