ಮರಳು ಸಾಗಾಟ - ಪೊಲೀಸ್ ರೈಡ್ - ಚಾಲಕ ಪರಾರಿ
ಮಂಗಳೂರು: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಮರಳನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯ ಪಿಎಸ್ಸೈ ಗುರುವಪ್ಪ ಕಾಂತಿ ಅವರು ಅ.11ರಂದು ರಾತ್ರಿ ಗಸ್ತಿನಲ್ಲಿದ್ದ ಸಂದರ್ಭ ಲಾರಿಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ. ಈ ವೇಳೆ ಲಾರಿಯನ್ನು ಅಡ್ಡ ಹಾಕಿ ನಿಲ್ಲಿಸಿದಾಗ ಚಾಲಕ ಲಾರಿಯಿಂದ ಇಳಿದು ಪರಾರಿಯಾಗಿ ದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭ ಒಂದು ಲಾರಿ, ಅದರಲ್ಲಿದ್ದ ಸುಮಾರು 1ಯೂನಿಟ್ ನಷ್ಟು ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಲಾರಿಯ ಚಾಲಕ ಮತ್ತು ಮಾಲಕನ ಮೇಲೆ ಅಕ್ರಮ ಮರಳು ಸಾಗಾಟದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
Comments
0 comment