ಪುತ್ತೂರು: ಕಳೆಂಜ - ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಚಿನ್ನ, ಬೆಳ್ಳಿ, ನಗದು ಕಳ್ಳತನ
ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಸೃಷ್ಟಿಸಿ ಕಳವು

ಉಪ್ಪಿನಂಗಡಿ: ಪೆರ್ನೆಯ ಕಳೆಂಜ - ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ಕಳ್ಳತನ ನಡೆದಿದ್ದು ಅ.15ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. 

ಕಳೆದ ಡಿಸೆಂಬರ್‌ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತಾರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೆ ಎರಡು ಪವನಿನ ಇನ್ನೊಂದು ಚಿನ್ನದ ಸರವೂ ನಾಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ.15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿವೆ. 

ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ

ದೇವಸ್ಥಾನದಲ್ಲಿ ಈಗಾಗಲೇ ಕಮಿಟಿ ಇದ್ದು ಅದನ್ನು ಹೊರತಾಗಿ ಬೇರೊಂದು ಖಾಸಗಿ ಟ್ರಸ್ಟ್ ಅನ್ನು ಸ್ಥಾಪಿಸಿ ದೇಗುಲದಿಂದ ಕಳ್ಳತನ ನಡೆಸಲಾಗಿದೆ. ದೇಗುಲದ ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಸೃಷ್ಟಿ ದೇಗುಲಕ್ಕೆ ಕನ್ನ ಹಾಕಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕಮಿಟಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಈ ಕುರಿತು ಪೊಲೀಸ್ ದೂರು ನೀಡಿರುವ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ, ಕಬ್ಬಿಣದ ಕಪಾಟನ್ನು ದೇವಾಲಯದ ಕಾರ್ಯಾಲಯದಿಂದ ಕಳವುಗೈದು ಅದನ್ನು ಒಡೆದು ಅದರಲ್ಲಿದ್ದ ದಾಖಲೆಪತ್ರಗಳನ್ನು ನಾಶ ಮಾಡಲಾಗಿದೆ. ಅದರಲ್ಲಿದ್ದ ನಗದು, ಬೆಳ್ಳಿ ವಸ್ತುಗಳನ್ನು ಕಳವು ಮಾಡಲಾಗಿದೆ. ಆ ಖಾಲಿ ಕಪಾಟು ಭದ್ರತಾ ಕೊಠಡಿಯಲ್ಲಿರುವುದು ಕಂಡು ಬಂದಿದೆ.

ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಹುಟ್ಟು ಹಾಕಿದ ಖಾಸಗಿ ಟ್ರಸ್ಟ್ ಮತ್ತು ಅದಕ್ಕೆ ಪೂರಕವಾದ ಸಮಿತಿಗೆ ದೇವಾಲಯದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು, ಟಸ್ಟ್ ಅಧ್ಯಕ್ಷ ಭರತ್ ಕುಮಾರ್ ಆರಿಗ ಪಟ್ಟೆಗುತ್ತು, ಪಡ್ನೂರು ಗ್ರಾಮದ ಅವಿನಾಶ್ ಜೈನ್ ಪರಂಗಾಜೆ ಹಾಗೂ ಇದಕ್ಕೆ ಪೂರಕವಾದ ಸಮಿತಿಯ ಸದಸ್ಯರು ಇದಕ್ಕೆ ಕಾರಣಕರ್ತರಾಗಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಮಿತಿಯ ಎಲ್ಲರ ಕೈವಾಡವಿದೆ - ಸಾರ್ವಜನಿಕರ ಗಂಭೀರ ಆರೋಪ

ಇನ್ನು ದೂರಿನಲ್ಲಿ ಉಲ್ಲೇಖವಾಗಿರುವ ಹೆಸರು ಮಾತ್ರವಲ್ಲದೆ, ಆ ಟ್ರಸ್ಟ್ನ ಕಾರ್ಯದರ್ಶಿ ಅಶೋಕ್ ಕುಮಾರ್ ಮುಳಿಪಡ್ಪು, ಗೌರವ ಸದಸ್ಯ ಎಂ ನಾರಾಯಣ ಭಟ್, ಸದಸ್ಯರುಗಳಾದ ಬಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಚಂದಪ್ಪ ಪೂಜಾರಿ ಕಳೆಂಜ ಕೆಳಗಿನಮನೆ, ನವೀನ್ ಕುಮಾರ್ ಪದಬರಿ, ಕೇಶವ ಪೂಜಾರಿ, ಲೋಕೇಶ್ ಗೌಡ, ಸುರೇಶ್ ಕುಮಾರ್ ಕೋಡಿ, ಪ್ರಶಾಂತ್ ಆಚಾರ್ಯ ನೇಂಜ, ರಘುನಾಥ ಮಲ್ಲಡ್ಕ, ಸುರೇಶ್ ಪೂಜಾರಿ ನೂಜೆ, ಶಿವಪ್ರಸಾದ್ ಪಚ್ಚಾಡಿ ಇವರ ಕೈವಾಡ ಸಂಶಯವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!