ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿ ಸಸ್ಪೆಂಡ್
ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು: ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕರ್ತವ್ಯದಿಂದ ಅಮಾನತುಗೊಂಡ ಬೆನ್ನಲ್ಲೇ ಕಳಸ ಉಪ ವಲಯ ಅರಣ್ಯಾಧಿಕಾರಿ (ಡಿ.ಆರ್.ಎಫ್.ಓ.) ದರ್ಶನ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ದರ್ಶನ್ ಅವರು ಧರಿಸಿರುವ ಆಭರಣದಲ್ಲಿ ಹುಲಿ ಉಗುರು ಇದ್ದು, ಈ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕೆAದು ಒತ್ತಾಯಿಸಿ ಆಲ್ಲೂರು ಹೋಬಳಿ ವ್ಯಾಪ್ತಿಯ ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ಆಲ್ಲೂರು ವಲಯದ ಅರಣ್ಯಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.

ಆದರೆ, ವಿಚಾರಣೆಗೆ ಸೂಚನೆ ನೀಡಿದರೂ ಹಾಜರಾಗದ ಹಿನ್ನೆಲೆ ಡಿ.ಆರ್.ಎಫ್.ಓ. ದರ್ಶನ್ ಅವರನ್ನು ಕೊಪ್ಪ ಡಿ.ಎಫ್.ಓ. ದಿನೇಶ್  ಅವರಿ ಮಧ್ಯಾಹ್ನ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದೀಗ ಬಾಳೆಹೊನ್ನೂರು ಎಸಿಎಫ್ ಚೇತನ್ ಗಸ್ತಿ, ಕಳಸ ಆರ್ ಎಫ್ ಓ ನಿಶ್ಚಿತ ಅವರ ನೇತೃತ್ವದಲ್ಲಿ ತಂಡ ಡಿ.ಆರ್.ಎಫ್.ಓ. ದರ್ಶನ್ ಅವರನ್ನು ಬಂಧಿಸಿ ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಓ) ನಂದೀಶ್ ಅವರ ಮುಂದೆ ಹಾಜರುಪಡಿಸಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!