ಕುಂದಾಪುರ: ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುತ್ತಿದ್ದವ ಅರೆಸ್ಟ್.!
ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ; ಓರ್ವನ ಬಂಧನ

ಕುಂದಾಪುರ : ಅನ್ನಭಾಗ್ಯದ ಅಕ್ಕಿಯನ್ನು ಗೂಡ್ಸ್ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಆಹಾರ ನಿರೀಕ್ಷಕರ ನೇತೃತ್ವದ ತಂಡ ಖಾರ್ವಿಕೇರಿ ಎಂಬಲ್ಲಿ  ಬಂಧಿಸಿದ ಘಟನೆ ನಡೆದಿದೆ. 

ಬಂಧಿತ ಆರೋಪಿಯನ್ನು ಕುಂದಾಪುರ ಮೇಲ್ಕೇರಿಯ ಕೃಷ್ಣ (43) ಎಂದು ಗುರುತಿಸಲಾಗಿದೆ. ಡಿ.28ರಂದು ಮಧ್ಯಾಹ್ನ ವೇಳೆ ಗೂಡ್ಸ್ ರಿಕ್ಷಾದಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. 

ಕುಂದಾಪುರ ಆಹಾರ ನಿರೀಕ್ಷಕ ಸುರೇಶ ಎಚ್.ಎಸ್. ಖಚಿತ ಮಾಹಿತಿಯಂತೆ ಕುಂದಾಪುರ ಎಸ್.ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಯವರೊAದಿಗೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದರು. ರಿಕ್ಷಾದಲ್ಲಿದ್ದ ಒಟ್ಟು 200 ಕೆ.ಜಿ ಅಕ್ಕಿಯನ್ನು ವಾಹನ ಸಹಿತ ವಶಪಡಿಸಿಕೊಂಡರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!