ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರ ಬಂಧನ.!
ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಇಬ್ಬರು ಅರೆಸ್ಟ್

ಅಯೋಧ್ಯೆಯ ರಾಮ ಮಂದಿರ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಾಂಬ್‌ ಹಾಕುವುದಾಗಿ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.

ತಹದ್ ಸಿಂಗ್ ಮತ್ತು ಓಂಪ್ರಕಾಶ್ ಬಂಧಿತರು. ಆರೋಪಿಗಳಿಬ್ಬರೂ ಗೊಂಡಾ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 

ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. ‘@iDevendraOffice ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ ಬೆದರಿಕೆ ಹಾಕಿದ್ದರು. ‘[email protected]’ ಮತ್ತು ‘[email protected]’ ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಸ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.

ಪೋಲೀಸರ ಪ್ರಕಾರ, ಈ ಇಮೇಲ್‌ಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಯ ಅಧಿಕಾರಿ ಎಂದು ಹೇಳಿಕೊಳ್ಳುವ ಜುಬೇರ್ ಖಾನ್ ಎಂಬ ವ್ಯಕ್ತಿಯಿಂದ ಆಯೋಜಿಸಲಾಗಿದೆ ಎಂದು ಹೇಳಲಾಗಿದೆ. ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!