ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ:  15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ
ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

ತಿರುವನಂತಪುರಂ: ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ದೋಷಿತರಾಗಿದ್ದ ಎಸ್‌ ಡಿಪಿಐ ಮತ್ತು ಪಿಎಫ್‌ ಐನ 15 ಮಂದಿ ಕಾರ್ಯಕರ್ತರಿಗೆ ಕೇರಳದ ಆಲಪುಳ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿ ಮಂಗಳವಾರ (ಜನವರಿ 30) ತೀರ್ಪು ಪ್ರಕಟಿಸಿದೆ.

2021ರ ಡಿಸೆಂಬರ್‌ 19ರಂದು ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ, ಆರ್‌ ಎಸ್‌ ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಅವರನ್ನು ಮನೆಯಲ್ಲೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪಿಎಫ್‌ ಐ ಮತ್ತು ಎಸ್‌ ಡಿಪಿಐ ಕಾರ್ಯಕರ್ತರು ದಾಳಿ ನಡೆಸಿ ಹತ್ಯೆಗೈದಿದ್ದರು.

ಎಸ್‌ ಡಿಪಿಐ ಮುಖಂಡ ಕೆಎಸ್‌ ಶಾನ್‌ ಡಿಸೆಂಬರ್‌ 18ರ ರಾತ್ರಿ ಆಲಪುಳದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ದಾಳಿ ನಡೆಸಿ ಕೊಲೆಗೈದಿದ್ದ ಕೆಲವೇ ಗಂಟೆಗಳ ನಂತರ ಆರ್‌ ಎಸ್‌ ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಅವರ ಕೊಲೆ ಘಟನೆ ನಡೆದಿತ್ತು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!