IPL ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿನಿಂದ 1.5 ಕೋಟಿ ರೂ. ಕಳೆದುಕೊಂಡ ಪತಿ - ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
▪️ ಸಾಲ ಕೊಟ್ಟವರ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
▪️ ಬೆಟ್ಟಿಂಗ್‌ ಗೀಳಿಗೆ 1.5 ಕೋಟಿ ಸಾಲ ಮಾಡಿದ ದರ್ಶನ್‌ ಬಾಬು

ಪತಿಯು ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿನಿಂದಾಗಿ 1.5 ಕೋಟಿ ರೂ. ಕಳೆದುಕೊಂಡಿದ್ದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿರುವ ದರ್ಶನ್‌ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಐಪಿಎಲ್‌ಗಾಗಿ ಬೆಟ್ಟಿಂಗ್‌ ಗೀಳಿಗೆ ಸಿಲುಕಿದ್ದ ದರ್ಶನ್‌ ಬಾಬು 1.5 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.19 ರಂದು ರಂಜಿತಾಳ ಮೃತದೇಹ ಪತ್ತೆಯಾಗಿದೆ. ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆ ಬರೆದಿದ್ದಾಳೆ. ಪ್ರಕರಣ ಸಂಬಂಧ ರಂಜಿತಾ ತಂದೆ ತನ್ನ ಅಳಿಯನಿಗೆ ಕಾನೂನುಬಾಹಿರವಾಗಿ ಸಾಲ ನೀಡಿರುವ 13 ಮಂದಿ ವಿರುದ್ಧ ದೂರು ನೀಡಿದ್ದಾರೆ. 

ದರ್ಶನ್‌ 2021 ರಿಂದ 2023 ರ ವರೆಗೆ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಹಣ ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಕ್ರಿಕೆಟ್‌ ಬೆಟ್ಟಿಂಗ್‌ಗೆ ಐಡಿಯಾ ಜೊತೆ ಹಣ ಕೊಟ್ಟವರು ಹಣ ಹಿಂದಿರುಗಿಸುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದರು. ದರ್ಶನ್‌ 54 ಲಕ್ಷ ರೂ. ಸಾಲ ಹಿಂದಿರುಗಿಸಲು ಬಾಕಿ ಇದೆ ಎಂದು ರಂಜಿತಾ ತಂದೆ ಆರೋಪಿಸಿದ್ದಾರೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!