ಉತ್ತರಾಖಂಡದ ನಾನಮ್ಮಠಾ ಸಾಹಿಬ್ ಗುರುದ್ವಾರದ ಕರಸೇವಾ ಮುಖ್ಯಸ್ಥನನ್ನು ಇಂದು (ಗುರುವಾರ) ಮುಂಜಾನೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಯು 'ಡೇರಾ' ಒಳಗೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಸಂಭವಿಸಿದೆ. ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಬೈಕ್ನಲ್ಲಿ ಗುರುದ್ವಾರಕ್ಕೆ ನುಗ್ಗಿ ತಾರ್ಸೆಮ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಎದೆಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ತಾರ್ಸೆಮ್ ಸಿಂಗ್ ಅವರನ್ನು ಖತಿಮಾದ ಆಸ್ಪತ್ರೆಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗಲಿಲ್ಲ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಉತ್ತರಾಖಂಡ ಪೊಲೀಸರು ಈ ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ. ಶಾಂತಿ ಕಾಪಾಡಲು ಉಧಮ್ ಸಿಂಗ್ ನಗರ ಜಿಲ್ಲೆಯ ನಾನಕ್ಕಟ್ಟಾ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಶಾಂತಿ ಕಾಪಾಡುವಂತೆ ಪೊಲೀಸರು ಸಿಖ್ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
Comments
0 comment