ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಬಾಲಕ ಆತ್ಮಹತ್ಯೆ
ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಶುಕ್ರವಾರ ಸಂಜೆ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಏಳನ ತರಗತಿಯಿಂದ ಮುಂದಿನ ತರಗತಿಗೆ ತೇರ್ಗಡೆ ಹೊಂದಿದ್ದ. 

ನಂದನ್ ಪಂಜದ ರೋಹಿತ್ ಗೌಡ ಅವರ ಪುತ್ರ. ತಂದೆಯ ಮರಣದ ನಂತರ ದುಗಲಾಡಿಯಲ್ಲಿರುವ ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿದ್ದ. ಶುಕ್ರವಾರ ನಂದನ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದ. ತನ್ನ ಸೈಕಲ್ ರಿಪೇರಿ ಮಾಡಿಕೊಡುವಂತೆ ಕುಟುಂಬಸ್ಥರನ್ನು ಒತ್ತಾಯಿಸಿದ್ದ.

ದೋಷಪೂರಿತ ಇನ್ವರ್ಟರ್ ಸರಿಪಡಿಸಲು ತಂತ್ರಜ್ಞರು ಮನೆಗೆ ಬಂದಿದ್ದರಿಂದ ಮುಂದಿನ ದಿನದಲ್ಲಿ ದುರಸ್ತಿ ಮಾಡಲಾಗುವುದು ಎಂದು ಮನೆಯಲ್ಲಿರುವ ನಿವಾಸಿಗಳು ಹೇಳಿದರು. ಆದರೆ, ಸೈಕಲ್ ಓಡಿಸಲು ಸಾಧ್ಯವಾಗುತ್ತಿಲ್ಲ ಎಂದು ನೊಂದ ನಂದನ್ ಮನೆಯೊಳಗಿನ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡಿದ್ದಾನೆ.ಈ ಸಂಬ0ಧ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!