ಉಡುಪಿ: ಹಾರ್ನ್ ಹಾಕಿದ್ದಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ   ಕಾರು ಚಾಲಕ.!!
ಎಕ್ಸ್ ಪ್ರೆಸ್ ಬಸ್ ಚಾಲಕನಿಗೆ ಹಲ್ಲೆ

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ  ಬಸ್ ಡ್ರೈವರಿಗೆ  ಹಲ್ಲೆ ಮಾಡಿ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್   ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನ ನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ.

ಬಸ್ಸಿನ ಕರ್ಕಶ ಹಾರ್ನ್‌ಗೆ  ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಎಂದು  ಹೇಳಲಾಗಿದೆ.  ಬಸ್ ಚಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಹಲ್ಲೆ ಪ್ರಕರಣಕ್ಕೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. 

ಓವರ್‌ಟೇಕ್ ಮಾಡಿದ ವಿಚಾರವಾಗಿ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕ ಶೈಲೇಂದ್ರ ಯಾನೆ ಶೈಲು ಎಂಬವರ ಮೇಲೆ ಕಾರು ಚಾಲಕ ಮುಲ್ಕಿಯ ಇಸ್ಮಾಯಿಲ್ ಆತೀಕ್ ಎಂಬಾತ ಇಂದು ಬೆಳಗ್ಗೆ ಪಡುಬಿದ್ರೆಯಲ್ಲಿ ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. 

ಆದರೆ ಸಮಾಜಿಕ ಜಾಲತಾಣಗಳಲ್ಲಿ ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುದ್ದಿ ಹರಿದಾಡಿತ್ತು. ಸದ್ಯ ಇದು ಸುಳ್ಳು ಸುದ್ದಿ ಎಂಬುದಾಗಿ ತಿಳಿದುಬಂದಿದೆ ಹಲ್ಲೆಯಷ್ಟೇ ನಡೆದಿದೆ ಎನ್ನಲಾಗಿದೆ.  


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!