ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಪೋಷಕರ ಹುಡುಕಾಟ
ಫೇಲ್ ಆಗುವ ಭಯದಿಂದ ಯುವಕ ನಾಪತ್ತೆ
ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆ

 

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Result) ಫಲಿತಾಂಶ ಪ್ರಕಟವಾಗಲಿದ್ದು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

ಸುರೇಶ್​ ಮತ್ತು ರೂಪ ದಂಪತಿಗಳ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!