ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಘೋಷಣೆ
ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಘೋಷಣೆ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ.

ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕಾಮತ್, ಮೂಲ್ಕಿ– ಮೂಡುಬಿದಿರೆ ಕ್ಷೇತ್ರಕ್ಕೆ ವಿಜಯನಾಥ್ ವಿಠಲ ಶೆಟ್ಟಿ, ಸುಳ್ಯ ಕ್ಷೇತ್ರಕ್ಕೆ ಸುಮನಾ ಬೆಳ್ಳಾರ್ಕರ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಎಡಮಲೆ ಅವರು, ‘ಬೆಂಗಳೂರಿನಲ್ಲಿ ಸೋಮವಾರ ಬಿಡುಗಡೆಗೊಳಿಸಿರುವ ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಎರಡನೇ ಪಟ್ಟಿ ಮಾರ್ಚ್ 27 ರಂದು ಬಿಡುಗಡೆಯಾಗಿದೆ. ಆಗ ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ’ ಎಂದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!