ಬಂಟ್ವಾಳ: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಅಟ್ಯಾಕ್ ನಡೆದಿದೆ. ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಭಯಾನಕ ತಲ್ವಾರ್ ದಾಳಿ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ತಲ್ವಾರ್ ದಾಳಿ ನಡೆದಿದೆ ಎನ್ನಲಾಗಿತ್ತು.
ಬಜರಂಗದಳ ಪೆರಾಜೆ ಸಂಚಾಲಕ ಮಹೇಂದ್ರ ಮೇಲೆ ಮತ್ತು ಪ್ರಶಾಂತ್ ನಾಯಕ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರು ಕೆಲಸ ಮುಗಿಸಿ ಮನೆಗೆ ತೆರಳುವ ಸಂಧರ್ಭ ಗಲಾಟೆ ನಡೆದಿದೆ.
ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಮೊದಲು ಇವರು ಸಾಗುತ್ತಿದ್ದ ವಾಹನಕ್ಕೆ ಓಮ್ಮಿ ಗಾಡಿಯಲ್ಲಿ ಡಿಕ್ಕಿ ಹೊಡೆಯಲಾಗಿದೆ. ನಂತರ ಗಲಾಟೆ ನಡೆದಿದೆ. ಈ ಹಿಂದೆ ಕೂಡ ಆರೋಪಿಗಳ ಗುಂಪೊಂದು ತಲ್ವಾರ್ ತೋರಿಸಿ ಬೆದರಿಕೆ ಒಡ್ಡಿದ್ದರೂ ಎನ್ನಲಾಗಿದೆ. ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ವಾರ್ನಿಂಗ್ ಕೊಟ್ಟು ಕಳಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯ ಯಾವುದೇ ರೀತಿಯ ತಲ್ವಾರ್ ದಾಳಿ ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
Comments
0 comment