ಕಡಬ ತಾಲೂಕು ಕಛೇರಿಯಲ್ಲಿ ಕಡತ ವಿಲೇವಾರಿ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ದಬಾಸಿದ ಸಿಬ್ಬಂದಿ
5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ!: ಪ್ರಶ್ನಿಸಿದ ಪತ್ರಕರ್ತನಿಗೆ ದಬಾಸಿದ ತಾಲೂಕು ಕಛೇರಿ ಸಿಬ್ಬಂದಿ

ಕಡಬ: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಬಗ್ಗೆ ಅರೋಪ ವ್ಯಕ್ತವಾಗಿದೆ.

ಕಳೆದ 5 ತಿಂಗಳ ಹಿಂದೆ ಸುಬ್ರಹ್ಮಣ್ಯದ ಮಹಿಳೆಯೋರ್ವರು 94 ಸಿ ಅರ್ಜಿ ಸಲ್ಲಿಸಿದ್ದರು. ಬಳಿಕ ಕುಂಟುತ್ತಾ ಸಾಗುತ್ತಾ ವಿಲೇವಾರಿಯಾಗಲಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾಮದ ಕಡತ ವಿಲೇವಾರಿ ಮಾಡುವ ಸಿಬ್ಬಂದಿ ಬಳಿ ತೆರಳಿ ಕಡಬದ ಪತ್ರಕರ್ತರೋರ್ವರು ವಿಚಾರಿಸುವ ವೇಳೆ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಾರೆ. ಪತ್ರಕರ್ತರು ಎಂದು ಪರಿಚಯಿಸಿಕೊಂಡು ಇಲ್ಲಿಗೆ ಬರಬೇಡಿ ಎಂದು ದಬಾಯಿಸಿದ್ದಾರೆ. ಅಲ್ಲದೆ ಕಡತ ಬೇಕಾದರೆ ಉಪತಹಸೀಲ್ದಾರ , ಟಪಾಲು ನಿರ್ವಹಣೆ ಮಾಡುವ ಸಿಬ್ಬಂದಿ ಜೊತೆ ಅಲ್ಲಿ ವಿಚಾರಿಸಿ, ನಾನು ಆ ದಾಖಲೆಯನ್ನು ವಿಲೇವಾರಿ ಮಾಡುವುದಿಲ್ಲ ಎಂದು ದಬಾಯಿಸಿದ್ದಾರೆ.

ಈ ಬಗ್ಗೆ ತಹಸೀಲ್ದಾರ ಮತ್ತು ಉಪತಹಸೀಲ್ದಾರ ಅವರಿಗೆ ಮೌಖಿಕ ದೂರು ನೀಡಿದ್ದು, ಕಡತ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದರಲ್ಲದೆ ಈ ಬಗ್ಗೆ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸಭ್ಯತೆಯಿಂದ ವರ್ತಿಸಲು ತಿಳಿ ಹೇಳುವುದಾಗಿ ತಹಸೀಲ್ದಾರ್ ಪತ್ರಕರ್ತರಿಗೆ ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!