ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗೆ ಸಂಬಂಧಿಸಿದ ಅಪಾರ್ಟ್ಮೆಂಟ್ ಮತ್ತು ಲ್ಯಾಬ್‌‌ಗೆ ಲೋಕಾಯುಕ್ತ ಅಧಿಕರಿಗಳ ತಂಡ ದಾಳಿ ನಡೆಸಿದೆ.

ಮಂಗಳೂರಿನ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡಿಡಿ ಆಗಿದ್ದ ನಿರಂಜನ್ ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.

ನಿರಂಜನ್ ಅವರಿಗೆ ಸೇರಿದ ಅಪಾರ್ಟ್‌ಮೆಂಟ್‌ಗೆ ಮತ್ತು ಅವರ ಪತ್ನಿ ಒಡೆತನದ ಡಯಾಗ್ನಾಸ್ಟಿಕ್ ಲ್ಯಾಬ್ ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ನಿರಂಜನ್ ಅವರಿಗೆ ಸಂಬಂಧಿಸಿದ ಕುಶಾಲನಗರ ಮತ್ತು ಪಿರಿಯಾಪಟ್ಟಣದ ಮನೆಯಲ್ಲೂ ಶೋಧ ನಡೆಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!