ಸುರತ್ಕಲ್‌: ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮರು
ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮರು

ಸುರತ್ಕಲ್‌: ಬಾವಿಯಿಂದ ನೀರು ಸೇದುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಎಗರಿಸಿದ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ವರದಿಯಾಗಿದೆ.

ಪುಷ್ಪಾ (70) ಎಂಬವರು ಇಂದು ಬೆಳಗ್ಗೆ ತಡಂಬೈಲ್‌ನ ತನ್ನ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ ಎಂದು ಅವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ.

ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!