ಮಂಗಳೂರು: ರಾಡ್‌ನಿಂದ ಹೊಡೆದು ಯುವಕನ ಕೊಲೆ.!
ಯುವಕನ ಹತ್ಯೆ

ಮಂಗಳೂರು: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧವಿರಿಸಿಕೊಂಡಿರುವ ಸಂಶಯದಲ್ಲಿ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್‌ನಿಂದ ಹೊಡೆದು ಕೊಲೆಗೈದ ಘಟನೆ ಕೂಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ ಎಂದು ‌ಪೊಲೀಸರು ತಿಳಿಸಿದ್ದು, ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಕೊಲೆಯಾದ ಯುವಕ.

ಪ್ರಕರಣದ ವಿವರ:

ಕೊಲೆಯಾದ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ ಪಶ್ಚಿಮ ಬಂಗಳಾದವರಾಗಿದ್ದು, ಕುಳೂರಿನಲ್ಲಿ ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ವಾಸುದೇವ ಗುನಿಯಾನಿಗೆ ಬಿಕಾಸ್ ಗುನಿಯಾ ಊರಿನ ಯುವತಿಯ ಜತೆ ಹಲವು ವರ್ಷದ ಹಿಂದೆ ಮದುವೆಯಾಗಿತ್ತು. ಆತನ ಪತ್ನಿ ಪಶ್ಚಿಮ ಬಂಗಳಾದಲ್ಲೇ ವಾಸ್ತವ್ಯವಿದ್ದಳು. ಆಕೆಯ ಜತೆ ಬಿಕಾಸ್ ಗುನಿಯಾನಿಗೆ ಅಕ್ರಮ ಸಂಬಂಧವಿದೆ, ಮೊಬೈಲ್ ಮೂಲಕ ಮಾತನಾಡುತ್ತಾನೆ ಎಂಬ ಸಂಶಯ ವ್ಯಕ್ತಪಡಿಸಿದ ಆರೋಪಿಯು ಈ ವಿಚಾರದಲ್ಲಿ ಹಲವು ಬಾರಿ ಗಲಾಟೆ ಮಾಡಿದ್ದ ಎನ್ನಲಾಗಿದೆ. ರವಿವಾರ ಮಧ್ಯಾಹ್ನ ವಾಸುದೇವ ಗುನಿಯಾ ಪಾನಮತ್ತನಾಗಿ ಅಕ್ರಮ ಸಂಬಂಧದ ನೆಪದಲ್ಲಿ ಬಿಕಾಸ್ ಜತೆ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಆರೋಪಿ ವಾಸುದೇವ ರಾಡ್‌ನಿಂದ ಬಿಕಾಸ್‌ನ ಎದೆಗೆ ಗುದ್ದಿದ್ದಾನೆ ಎನ್ನಲಾಗಿದೆ.‌ ಇದರಿಂದ ಗಂಭೀರ ಗಾಯಗೊಂಡ ಬಿಕಾಸ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!